Uncategorized
ಸರ್ಕಾರಿ ಆಸ್ಪತ್ರೆ ಬಳಿ ಸರ್ವೆ ಕಾರ್ಯ ನಿಲ್ಲಿಸಿ: ಕರವೇ ಎಚ್ಚರಿಕೆ.

ದೊಡ್ಡಬಳ್ಳಾಪುರ:ನಗರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಆವರಣದ ಸರ್ವೆ ನಂ.28 ರಲ್ಲಿ ಹೆಚ್ಚುವರಿ ಆರೋಗ್ಯ ಸೌಲಭ್ಯಗಳನ್ನು ನಿರ್ಮಿಸುವ ಸಲುವಾಗಿ ಸರ್ವೆ ಮಾಡುವು ದನ್ನು ನಿಲ್ಲಿಸುವಂತೆ ಕನ್ನಡಿಗರ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ತಾಲೂಕು ಘಟಕದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ, ಆಸ್ಪತ್ರೆ ಆಡಳಿತ ಅಧಿಕಾರಿಗೆ ದೂರು ನೀಡಲಾಗಿದೆ.
ಈ ಕುರಿತಂತೆ ಮಾತನಾಡಿದ ಮುಖಂಡರು, ದೊಡ್ಡಬಳ್ಳಾಪುರ ತಾಲ್ಲೂಕು ಆಸ್ಪತ್ರೆ ಆವರಣ ಸರ್ವೆ ನಂ.28 ರಲ್ಲಿ ಟೋಟಲ್ ಸ್ಪೇಷನ್ ಸರ್ವೆ ಮಾಡಿ ಹೆಚ್ಚುವರಿ ಆರೋಗ್ಯ ಸೌಲಭ್ಯಕ್ಕಾಗಿ 100 ಹಾಸಿಗೆಯ ತಾಲ್ಲೂಕು ಆಸ್ಪತ್ರೆ 2ನೇ ಮಹಡಿಯಲ್ಲಿ 50 ಹಾಸಿಗೆಯ ಕ್ರಿಟಿಕಲ್ ಕೇರ್ ಕಟ್ಟಡ ನಿರ್ಮಿಸುವ ಸಲುವಾಗಿ ನಕ್ಷೆಗಳನ್ನು ತಯಾರಿಸಲು ಸರ್ವೆ ಮಾಡಲಾಗುತ್ತಿದೆ ಎಂದು ಗಮನಕ್ಕೆ ಬಂದಿದೆ.
ಈಗಾಗಲೇ ಸರ್ಕಾರಿ ಆದೇಶದ ಅನ್ವಯ ದೊಡ್ಡಬಳ್ಳಾಪರ ತಾಲ್ಲೂಕು ಆಸ್ಪತ್ರೆಯನ್ನು 100 ಹಾಸಿಗೆಗಳಿಂದ 250 ಹಾಸಿಗೆ ಗಳಾಗಿ ಗ್ರಾಮೀಣ ಜಿಲ್ಲಾಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ 2 ಹಂತಗಳಲ್ಲಿ ಮೊದಲನೇ ಹಂತ ರೂ.11,300.00 ಲಕ್ಷಗಳು 2ನೇ ಹಂತ 5,400,00 ಲಕ್ಷಗ ಒಟ್ಟಾರೆ 16,700.00 ಲಕ್ಷ ಗಳಿಗೆ ಅನುಮೋದನೆ ನೀಡಲಾಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕು, ಸಿದ್ದೇನಾಯಕನಹಳ್ಳಿ ಸರ್ವೆ ನಂ. 20 ರಲ್ಲಿ 9-38 ಎಕೆರೆ/ಗುಂಟೆ ಜಮೀನು ಗುರುತಿಸಿರುವ ನಿವೇಶನದಲ್ಲಿ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಅವರು ಜಿಲ್ಲಾಸ್ಪತ್ರೆಯ ಶಂಕು ಸ್ಥಾಪನೆ ಸಹ ನೇರವೇರಿಸಿದ್ದಾರೆ.
ಅದರಂತೆಯೇ ಕಾಮಗಾರಿಯ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಆರೋಗ್ಯ ಮೂಲ ಸೌಕರ್ಯ ಮಿಷನ್ ಹಾಗೂ ಕರ್ನಾಟಕ ಸರ್ಕಾರ ಅಡಿಯಲ್ಲಿ ಅಂದಾಜು ಮೊತ್ತ ರೂ.2335.00 ಲಕ್ಷಗಳಿಗೆ ಆಡಳಿತಾತ್ಮಕ ಅನುಮೋದನೆ ಆಗಿರುತ್ತದೆ.
ಮುಖ್ಯ ಇಂಜಿನಿರ್ ರವರ ಕಛೇರಿಯ ತಾಂತ್ರಿಕ ಮಂಜೂರು ಮಾಡಿ ತಾಂತ್ರಿಕ ಮಂಜೂರಾತಿ ನೀಡಿರುತ್ತಾರೆ. ಇದರ ಬೆಳವಣಿಗೆಯ ಮಧ್ಯ ಜುಲೈ.14 ರಂದು ಕಾಮಗಾರಿಯದ ನಿಲ್ಲಿಸುವಂತೆ ಗುತ್ತಿಗೆದಾರರಿಗೆ ನೋಟಿಸ್ ನೀಡಲಾಗಿದೆ.
ಅಲ್ಲದೆ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ (ತಾಯಿ ಮಗು) ಆಸ್ಪತ್ರೆ ಸರ್ವೆ ನಂ.28 ರಲ್ಲಿ ಸರ್ವೆ ಮಾಡಿ 100 ಹಾಸಿಗೆ ಕಟ್ಟಡ ಅದರ ಮೇಲೆ ಕ್ರಿಟಿಕಲ್ ಕೇರ್ ಕಟ್ಟಡ ಕಟ್ಟಲು ಸರ್ವೆ ಮಾಡುತ್ತಿದ್ದು, ಸಾರ್ವಜನಿಕರಲ್ಲಿ ಅನುಮಾನ ವ್ಯಕ್ತವಾಗುತ್ತಿದೆ.
ಸರ್ವೆ ನಂ.20 ರಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡವನ್ನು ನಿಲ್ಲಿಸಿ, ಇಲ್ಲಿ ಕಟ್ಟುವ ಉದ್ದೇಶವೇನು..? ಇದನ್ನು ಕರವೇಯು ಉಗ್ರವಾಗಿ ಖಂಡಿಸುತ್ತೇವೆ. ಹಾಗೂ ಇಲ್ಲಿ ಸರ್ವೆ ಮಾಡಿದರೆ ಸರ್ವೆಗೆ ಅಡ್ಡಿಪಡಿಸುವುದಲ್ಲದೇ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಈ ವೇಳೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಎಸ್ಎಲ್ಎನ್ ವೇಣು, ಉಪಾಧ್ಯಕ್ಷ ಜೋಗಹಳ್ಳಿ ಅಮ್ಮು ಕಾರ್ಯದರ್ಶಿ ಮಂಜು, ಖಜಾಂಚಿ ಆನಂದ್, ನಗರಾಧ್ಯಕ್ಷ ಶ್ರೀನಗರ ಬಶೀರ್.
Uncategorized
ಸಾಧಕರ ಸನ್ಮಾನಕ್ಕಾಗಿ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ : 2025-26ನೇ ಸಾಲಿನ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಸನ್ಮಾನಿಸಲು ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ 2025-26ನೇ ಸಾಲಿನ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಸನ್ಮಾನಕ್ಕೆ ಆಯ್ಕೆ ಸಮಿತಿಯ ಜೊತೆ ಸಭೆ ನಡೆಸಿದ ನಂತರ ವಿವಿಧ ಕ್ಷೇತ್ರಗಳಲ್ಲಿ ವಿಶೇಷವಾದ ಸಾಧನೆ ಮಾಡಿದ ಸಾಧಕರಿಗೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಿ ಗೌರವಿಸಲಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸನ್ಮಾನ ಸಮಿತಿ ಅಧ್ಯಕ್ಷರು ಆದ ಶಂಕರಯ್ಯ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸನ್ಮಾನಕ್ಕೆ ಸಾಹಿತ್ಯ ವೈದ್ಯಕೀಯ, ಸೃಜನಾತ್ಮಕ ಕಲೆ, ಸೇನೆ, ಕ್ರೀಡೆ, ಸಮಾಜ ಸೇವೆ ಕಾರ್ಮಿಕ ಶಿಕ್ಷಣ,ಸಾಂಸ್ಕೃತಿಕ, ಪತ್ರಿಕೋದ್ಯಮ, ರಂಗಭೂಮಿ, ಪ್ರಗತಿಪರ ಹೋರಾಟ, ಇನ್ನೂ ಮುಂತಾದ ಕ್ಷೇತ್ರಗಳಲ್ಲಿ ಗಣನೀಯವಾದ ಸೇವೆಯನ್ನು ಸಲ್ಲಿಸಿರುವ ಸಾಧಕರು ತಮ್ಮ ಇತ್ತೀಚಿನ ಬಾವಚಿತ್ರ ದೂರವಾಣಿ ಸಂಖ್ಯೆ ಮತ್ತು ತಮ್ಮ ಕ್ಷೇತ್ರದಲ್ಲಿ ಸೇವೆ ಮಾಡಿದ ಸಂಪೂರ್ಣ ಮಾಹಿತಿ ಯ ಯಶೋಗಾತೆಯನ್ನು ಹಾಗೂ ಪತ್ರಿಕೆಗಳಲ್ಲಿ ಪ್ರಕಟಗೊಂಡ ಮಾಹಿತಿ ವಿವಿದ ಸಂಘಟಣೆಗಳು ನೀಡಿದ ಪ್ರಶಸ್ತಿಪತ್ರಗಳ ಪ್ರತಿಗಳು ಇನ್ನೂ ಮಂತಾದ ದಾಖಲೆಗಳ ಜೆರಾಕ್ಷಗಳನ್ನು ಒಳಗೊಂಡ ಸಂಪೂರ್ಣವಾದ ಮಾಹಿತಿಯನ್ನು ಹೊಂದಿದ ಅರ್ಜಿಯನ್ನು ದಿನಾಂಕ 11-08-2025 ರ ಮದ್ಯಾನ್ಹ 2-00 ಗಂಟೆಯೊಳಗೆ ತಾಲ್ಲೂಕು ಕಛೇರಿ ದೊಡ್ಡಬಳ್ಳಾಪುರ ಇಲ್ಲಿ ಸಲ್ಲಿಸಿಸುವುದು ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ತಿಳಿಸಿದ್ದಾರೆ.
-
ಬೆಂಗಳೂರು ಗ್ರಾಮಾಂತರ10 months agoಕಾವೇರಿ ಹಾಗೂ ಎತ್ತಿನಹೊಳೆ ನೀರು ಕೊಡಿ ವೃಷಭಾವತಿ ನೀರು ಬೇಡ – ಶಾಸಕ ಧೀರಜ್ ಮುನಿರಾಜ್.
-
ಬೆಂಗಳೂರು ಗ್ರಾಮಾಂತರ10 months agoಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ : ಡಿ.ಕೆ.ಶಿವಕುಮಾರ್
-
ತುಮಕೂರು10 months agoಎತ್ತಿನ ಹೊಳೆ ಯೋಜನೆಯ ಕಾಮಗಾರಿಗಳ ಪರಿಶೀಲನೆ
-
ಬೆಂಗಳೂರು ಗ್ರಾಮಾಂತರ9 months agoಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ವ್ಯಸನಗಳಿಂದ ದೂರವಿರಿ:ಡಾ.ನವೀನ್ ಕುಮಾರ್
-
ಬೆಂಗಳೂರು ಗ್ರಾಮಾಂತರ9 months agoಪ್ರತಿಭಾ ಪುರಸ್ಕಾರ ಸಮಾರಂಭ
-
ಬೆಂಗಳೂರು ಗ್ರಾಮಾಂತರ10 months agoಮಿಂಚಿನ ಕಾರ್ಯಾಚರಣೆ. ದರೋಡೆಕೋರರ ಬಂಧನ.
-
ಬೆಂಗಳೂರು ಗ್ರಾಮಾಂತರ10 months agoಪ್ರತಿಯೊಬ್ಬರೂ ವ್ಯಕ್ತಿತ್ವ, ಸಾಮಾಜಿಕ ಪ್ರಜ್ಞೆಯನ್ನು ಮೈಗೂಡಿಸಿಕೊಳ್ಳಬೇಕು.
-
ಮೈಸೂರು10 months agoಇ-ಸ್ವತ್ತು ನೀಡಲು ಲಂಚ. ವಲಯ ಕಚೇರಿ 4 ರ ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ.
