ಬೆಂಗಳೂರು ಗ್ರಾಮಾಂತರ
ಸೇವಾ ಕಾರ್ಯಗಳೊಂದಿಗೆ ಸಮಕಾಲೀನ ಅಗತ್ಯಗಳಿಗೆ ಸ್ಪಂದಿಸುವ ಸಂಕಲ್ಪ
ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಲಯನ್ಸ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಪ್ರೊ.ರವಿಕಿರಣ್ ಹಾಗೂ ಕಾರ್ಯಕಾರಿ ಸಮಿತಿಯ ಪದಗ್ರಹಣ ಕಾರ್ಯಕ್ರಮ
ದೊಡ್ಡಬಳ್ಳಾಪುರ: ಇಲ್ಲಿನ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್ಟಿಟ್ಯೂಷನ್ಸ್ನ 2025-26ನೇ ಸಾಲಿನ ಅಧ್ಯಕ್ಷರಾಗಿ ಪ್ರೊ.ರವಿಕಿರಣ್ ಕೆ.ಆರ್ ಆಯ್ಕೆಯಾಗಿದ್ದು, ಎಸ್ಡಿಯುಐಆರ್ಎಸ್ ಸಭಾಂಗಣದಲ್ಲಿ ನಡೆದ 5ನೇ ಸಂಸ್ಥಾಪನಾ ವರ್ಷಾಚರಣೆ ಹಾಗೂ ಪದಗ್ರಹಣ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿದರು.
ಲಯನ್ಸ್ ಜಿಲ್ಲಾ ನಿಕಟಪೂರ್ವ ರಾಜ್ಯಪಾಲ ಬಿ.ಎಸ್.ನಾಗರಾಜ್ ಅಧಿಕಾರದ ಪ್ರತಿಜ್ಞಾ ವಿಧಿ ಬೋಧಿಸಿದರು. ಅವರು ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುಣಾತ್ಮಕ ಸೇವೆ ಹಾಗೂ ಸಾಮಾಜಿಕ ಕಾಳಜಿಯ ಸಂಕೇತವಾಗಿರುವ ಲಯನ್ಸ್ ಸಂಸ್ಥೆ ಶತಮಾನಕ್ಕೂ ಹೆಚ್ಚಿನ ಇತಿಹಾಸವನ್ನು ಹೊಂದಿರುವ ಸಂಸ್ಥೆಯಾಗಿದೆ. ಸಮಯ, ಪ್ರತಿಭೆ ಮತ್ತು ಸಂಪನ್ಮೂಲಗಳನ್ನು ಸಮಾಜಕ್ಕೆ ನೀಡುವ ಸಂಕಲ್ಪ ಈ ಸಂಸ್ಥೆಯದ್ದಾಗಿದ್ದು, ದೊಡ್ಡಬಳ್ಳಾಪುರದಲ್ಲಿ ಕಳೆದ 4 ವರ್ಷಗಳ ಹಿಂದೆ ಆರಂಭವಾದ ಆರ್.ಎಲ್.ಜಾಲಪ್ಪ ಲಯನ್ಸ್ ಸಂಸ್ಥೆ ತನ್ನ ಸ್ಪೂರ್ತಿದಾಯಕ ಸೇವೆಯಿಂದ ಜಿಲ್ಲೆ 317ಎಫ್ನಲ್ಲಿ ಸತತವಾಗಿ ಮೊದಲ ಸ್ಥಾನವನ್ನು ಪಡೆಯುತ್ತಿರುವುದು ಗಣನೀಯ. ಹೊಸ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಯೋಜನಾಬದ್ದತೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಗುಣಾತ್ಮಕ ಆಶಯ ಅಗತ್ಯ:
ಮುಖ್ಯಅತಿಥಿಯಾಗಿ ಪಾಲ್ಗೊಂಡ ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಸ್ಥಾಪನೆಯಾದ ದಿನದಿಂದಲೂ ಅನೇಕ ರಚನಾತ್ಮಕ ಕಾರ್ಯಗಳಿಂದ ಗಮನ ಸೆಳೆಯುತ್ತಿರುವ ಲಯನ್ಸ್ ಸಂಸ್ಥೆಯಲ್ಲಿ ಸೇವೆಯೇ ಪ್ರಧಾನ ಆಶಯವಾಗಿದೆ. ನಿರ್ದಿಷ್ಟ ಫಲಾನುಭವಿಗಳಿಗೆ ಸೇವೆ ತಲುಪಿದಾಗ ಸಾರ್ಥಕತೆ ಹೆಚ್ಚಿರುತ್ತದೆ. ಈ ನಿಟ್ಟಿನಲ್ಲಿ ಗುಣಾತ್ಮಕ ಆಶಯಗಳನ್ನು ಅನುಷ್ಠಾನಕ್ಕೆ ತರುವುದು ಅಗತ್ಯ ಎಂದರು.
800ಕ್ಕೂ ಹೆಚ್ಚು ಸೇವಾ ಕಾರ್ಯ:
ಅಧ್ಯಕ್ಷತೆ ವಹಿಸಿದ್ದ ಲಯನ್ಸ್ ಕ್ಲಬ್ ಅಧ್ಯಕ್ಷ ಜೆ.ಆರ್.ರಾಕೇಶ್, ಪ್ರಸಕ್ತ ವರ್ಷದಲ್ಲಿ 800ಕ್ಕೂ ಹೆಚ್ಚು ಸೇವಾ ಹಾಗೂ ಆಡಳಿತಾತ್ಮಕ ಕಾರ್ಯಕ್ರಮಗಳನ್ನು ಸಂಸ್ಥೆಯ ಮೂಲಕ ಆಯೋಜಿಸಲಾಗಿದೆ. ಶಿಕ್ಷಣ, ಆರೋಗ್ಯ, ಪರಿಸರ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, 8 ಲಕ್ಷಕ್ಕೂ ಅಧಿಕ ಫಲಾನುಭವಿಗಳನ್ನು ಮುಟ್ಟಿದೆ. ಈ ಹಂತದಲ್ಲಿ ಸಹಕರಿಸಿದ ಎಲ್ಲರೂ ಅಭಿನಂದನಾರ್ಹರು ಎಂದು ತಿಳಿಸಿದರು.
ವಿನೂತನ ಕಾರ್ಯಕ್ರಮಗಳಿಗೆ ಒತ್ತು:
ಪದಗ್ರಹಣ ಸ್ವೀಕಾರ ಭಾಷಣ ಮಾಡಿದ ನಿಯೋಜಿತ ಅಧ್ಯಕ್ಷ ಪ್ರೊ.ರವಿಕಿರಣ್ ಕೆ.ಆರ್ ಮಾತನಾಡಿ, ಉತ್ತಮ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸದಾ ಮುಂದಿರುವ ಲಯನ್ಸ್ ಸಂಸ್ಥೆಯ ಮೂಲಕ ವಿನೂತನ ಚಿಂತನೆಗಳ ಸಾಕಾರಕ್ಕೆ ಯೋಜಿಸಲಾಗಿದೆ. ಯುವಜನರಿಗೆ ಕೌಶಲ್ಯಾಭಿವೃದ್ದಿ ತರಬೇತಿ, ವಲಸಿಗ ಕನ್ನಡೇತರರಿಗೆ ಸರಳ ಕನ್ನಡ ಕಲಿಕೆಗೆ ಮಾರ್ಗದರ್ಶನ, ಜಾಲಪ್ಪ ಜನ್ಮಶತಮಾನೋತ್ಸವ ವರ್ಷದಲ್ಲಿ ಸಸಿಗಳನ್ನು ನೆಟ್ಟು ಬೆಳೆಸುವ ಅಭಿಯಾನ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ತಮ್ಮ ಅವಧಿಯಲ್ಲಿ ನಿರ್ವಹಿಸುವ ಚಿಂತನೆ ಇದೆ ಎಂದು ತಿಳಿಸಿದರು.
ಜಿಲ್ಲಾ ಮಧುಮೇಹ ವಿಭಾಗ ಸಂಯೋಜಕ ಎಲ್.ಎನ್.ಪ್ರದೀಪ್ಕುಮಾರ್, ಸಂಸ್ಥೆಯ ಕಾರ್ಯದರ್ಶಿ ಕೆ.ಸಿ.ನಾಗರಾಜ್, ಖಜಾಂಚಿ ಎಸ್.ರವಿಕುಮಾರ್, ಸಹಕಾರ್ಯದರ್ಶಿ ವರದರಾಜು, ನಿಕಟಪೂರ್ವ ಅಧ್ಯಕ್ಷ ಡಾ.ಶ್ರೀನಿವಾಸರೆಡ್ಡಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
2025-26ನೇ ಸಾಲಿನ ನೂತನ ಪದಾಧಿಕಾರಿಗಳು:
ಪ್ರೊ.ರವಿಕಿರಣ್ ಕೆ.ಆರ್(ಅಧ್ಯಕ್ಷ), ಸುಮಾ ಎ.ಎಸ್(ಕಾರ್ಯದರ್ಶಿ), ಕೆ.ಸಿ.ನಾಗರಾಜ್(ಖಜಾಂಚಿ),ಮುಕೇಶ್ ಎನ್.ಆರ್(ಸಹ ಕಾರ್ಯದರ್ಶಿ), ಕೆ.ಎಂ.ಮುನಿರಾಮೇಗೌಡ, ಕೆ.ಜಿ.ಶ್ರೀನಿವಾಸಮೂರ್ತಿ, ಬಾಬುಸಾಬಿ.ಎಚ್.ಕೆ(ಉಪಾಧ್ಯಕ್ಷರು), ಜೆ.ಆರ್.ರಾಕೇಶ್(ಎಲ್ಸಿಐಎಂ ಸಂಯೋಜಕ), ಎಂ.ಆರ್.ಶ್ರೀನಿವಾಸ್(ಸದಸ್ಯತ್ವ ಸಮಿತಿ ಮುಖ್ಯಸ್ಥ), ಎಸ್.ರವಿಕುಮಾರ್(ಸೇವಾ ಘಟಕದ ಮುಖ್ಯಸ್ಥ), ಬಿ.ಎಸ್.ಅರುಂಧತಿ(ಮಾರ್ಕೆಟಿಂಗ್ ಸಮಿತಿ ಮುಖ್ಯಸ್ಥೆ), ಡಾ.ಎಂ.ಶ್ರೀನಿವಾಸರೆಡ್ಡಿ(ಆಡಳಿತಾಧಿಕಾರಿ), ಹರ್ಷ ವೈ.ಎಂ(ಕಾರ್ಯಕ್ರಮ ಸಮಿತಿ ಮುಖ್ಯಸ್ಥ), ಎನ್.ಎಸ್.ರಶ್ಮಿ(ಪಿಆರ್ಒ), ಟಿ.ಮಹಂತೇಶಪ್ಪ(ಟೇಲ್ಟ್ವಿಸ್ಟರ್), ಎನ್.ವೆಂಕಟೇಶ್(ಟೇಮರ್), ವಿವಿಧ ಉಪ ಸಮಿತಿಗಳ ಮುಖ್ಯಸ್ಥರಾಗಿ ಎಲ್.ಎನ್.ಪ್ರದೀಪ್ಕುಮಾರ್(ವಿಜನ್), ಕೆ.ವಿ.ಪ್ರಸನ್ನಕುಮಾರ್(ಮಧುಮೇಹ), ಲಕ್ಷ್ಮೀಶ್ರೀನಿವಾಸ್(ಮಹಿಳಾ ಕ್ಷೇಮಾಭಿವೃದ್ದಿ), ಜಿಯಾವುಲ್ಲಾಖಾನ್(ಕ್ವೆಸ್ಟ್), ಅಜ್ಮತ್ ಉನ್ನೀಸಾ(ಮಾನಸಿಕ ಆರೋಗ್ಯ), ಕೆ.ಎಂ.ಅರಸೇಗೌಡ(ದಂತ), ಡಾ.ರವಿಕಿರಣ್(ಪಶುಆರೋಗ್ಯ), ಕೆ.ಮಂಜುನಾಥ್(ಹಸಿವು ನಿವಾರಣೆ), ಎನ್.ಎಸ್.ಬಾಬುರೆಡ್ಡಿ(ಪರಿಸರ), ಆರ್.ಎಂ.ಸುನಿಲ್ಕುಮಾರ್(ಯುವಜನ), ಕೆ.ಆರ್.ಮಂಜುಳಾ(ಸ್ಕ್ರಾಬ್ ಬುಕ್), ಕೆ.ವೀಣಾ(ಕನ್ನಡ ಮತ್ತು ಸಂಸ್ಕೃತಿ), ಬಿ.ಜ್ಯೋತಿ(ಪೀಸ್ ಪೋಸ್ಟರ್) ಮತ್ತು ಡಾ.ಚಿಕ್ಕಣ್ಣ(ಸಂಪಾದಕ), ನಿರ್ದೇಶಕರಾಗಿ ಬಿ.ಕೃಷ್ಣಪ್ಪ, ಐ.ಎಂ.ರಮೇಶ್ಕುಮಾರ್, ಎಲ್.ಎನ್.ನಾಗರಾಜ್, ಬಿ.ಆರ್.ವೇಣುಗೋಪಾಲ್, ಅತಿಕ್ ಅಹ್ಮದ್, ಸೈಯದ್ ನಿಜಾಮ್, ಡಾ.ವಿನಯಬಾಬು, ಡಾ.ಸಂದೀಪ್ರೆಡ್ಡಿ, ಡಾ.ವಿಜಯಕಾರ್ತಿಕ್, ಡಾ.ಕೆ.ಎಂ.ಶಿವಪ್ರಸಾದ್, ಡಾ.ಬಿ.ಎನ್.ಮಂಜುನಾಥ್, ಡಾ.ಮೃತ್ಯುಂಜಯ, ಎಂ.ಎಂ.ವಿಜಯಕುಮಾರ್, ಬಿ.ವಿಜಯ್ಕುಮಾರ್, ಮೇಘನಾ ವರ್ಣಿ, ಎನ್.ಎನ್.ಕಾವ್ಯ, ಸರಿತಾ ನಾಗರಾಜ್ ಮತ್ತು ರೋಜಾ ಮುಕೇಶ್ ಪದಗ್ರಹಣ ಕೈಗೊಂಡರು.
ಬೆಂಗಳೂರು ಗ್ರಾಮಾಂತರ
ಪ್ರತಿಭಾ ಪುರಸ್ಕಾರ ಸಮಾರಂಭ

ದೊಡ್ಡಬಳ್ಳಾಪುರ: ನಗರದ ಕನ್ನಡ ಜಾಗೃತ ಭವನದಲ್ಲಿ ಛಲವಾದಿ ಮಹಾಸಭಾದ ವತಿಯಿಂದ 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿ ಯು ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಛಲವಾದಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ, ಬೋದಿವೃಕ್ಷಕ್ಕೆ ನೀರೆರೆಯುವುದರ ಮೂಲಕ ಉದ್ಘಾಟನೆ ಮಾಡಿ ಮಾತನಾಡಿದ ಛಲವಾದಿ ಮಹಾಸಭಾದ ರಾಜ್ಯಧ್ಯಕ್ಷರಾದ ಶ್ರೀ ವಾಣಿ ಕೆ. ಶಿವರಾಮ್ ರವರು ಕಡುಬಡತನದ ವಾತಾವರಣದಲ್ಲಿ ಹುಟ್ಟಿಬೆಳೆದು, ಶಿಕ್ಷಣದ ಮಹತ್ವವನ್ನು ಅರ್ಥ ಮಾಡಿಕೊಂಡು, ಇಡೀ ಕರ್ನಾಟಕದಲ್ಲೇ ಮೊದಲಿಗರಾಗಿ,ಕನ್ನಡ ಭಾಷೆಯಲ್ಲಿ ಐ ಎ ಎಸ್ ಪರೀಕ್ಷೆಯನ್ನು ಪಾಸು ಮಾಡಿ, ಉನ್ನತ ಅಧಿಕಾರಿಯಾಗಿ, ಬಹುತೇಕ ಬಡವರಿಗಾಗಿ ಉತ್ತಮ ಸೇವೆಯನ್ನು ನೀಡಿ,ಉತ್ತಮ ಸಮಾಜ ಸೇವಕರಾದ.ಶಿವರಾಮ್ ರವರನ್ನು ಛಲವಾದಿ ಸಮುದಾಯದ ವಿದ್ಯಾರ್ಥಿಗಳು ಅನುಸರಿಸುವ ಮೂಲಕ ಉತ್ತಮ ಶಿಕ್ಷಣ ಪಡೆದುಕೊಳ್ಳಬೇಕು ಎಂದ ಅವರು ಛಲವಾದಿ ಸಮುದಾಯದ ಎಲ್ಲರೂ ಒಗ್ಗಟ್ಟಿನಿಂದ ಸಮುದಾಯದ ಏಳಿಗೆಗಾಗಿ ಶ್ರಮಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬಾಗವಹಿಸಿ, ಮಾತನಾಡಿದ ಡಾ: ದೇವರಾಜ್ ರವರು ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಇವರು, ಎಲ್ಲಾ ಸಮಾಜದ ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಗುಣಮಟ್ಟದ ಶಿಕ್ಷಣ ಕೊಡಿಸಲು ಉತ್ತಮವಾದ ವಾತಾವರಣ ಕಲ್ಪಿಸಿಕೊಡುವುದಲ್ಲದೇ, ವಿದ್ಯಾರ್ಥಿಗಳ ಕಡೆಗೆ ಹೆಚ್ಚು ಗಮನ ವಹಿಸಬೇಕಿದೆ. ಮಹಿಳೆಯರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಹೆಚ್ಚು ಕಾಳಜಿ ವಹಿಸಬೇಕಿದೆ ಎಂದು ಕಿವಿ ಮಾತು ಹೇಳಿದ ಅವರು ಸರ್ಕಾರವು ಸಮಾಜ ಕಲ್ಯಾಣ ಇಲಾಖೆವತಿಯಿಂದ ಉನ್ನತ ಶಿಕ್ಷಣಕ್ಕಾಗಿ sc/st ಸಮುದಾಯದ ವಿದ್ಯಾರ್ಥಿಗಳಿಗೆ ಒಂದು ಕೋಟಿ ರೂಪಾಯಿಗಳವರೆಗೆ ಪ್ರೋತ್ಸಾಹ ಧನ ನೀಡುತ್ತಿದೆ. ಈ ಯೋಜನೆಯನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸುತ್ತಾ, ಸರ್ಕಾರದ ಯೋಜನೆಗಳ ಕುರಿತು ವಿವರಣೆ ನೀಡಿದರು.
ಆಕಾಶವಾಣಿ ಕಾರ್ಯಕ್ರಮ ಗಳ ನಿರ್ಮಾಪಕರು ಹಾಗೂ ನಿವೃತ್ತ ನಿರ್ದೇಶಕರು ಮತ್ತು ಕವಿಗಳು, ಚಿಂತಕರೂ ಆದ “ಸುಬ್ಬು ಹೊಲೆಯಾರ್ “ರವರು ಮಾತನಾಡಿ ನಮ್ಮನ್ನ ಆಳುತ್ತಿರುವ ಸರ್ಕಾರಗಳು ನೈಜ ಬದುಕಿಗೆ ಉತ್ತಮ ಮಾರ್ಗದರ್ಶನ ನೀಡುವ ಶಿಕ್ಷಣದ ದಿಕ್ಕನ್ನೇ ಬದಲಾಯಿಸಿ, ಪುರಾತನ ಕಾಲದ ಶಿಕ್ಷಣ ಪದ್ದತಿಯ ಕಡೆಗೆ ಎಳೆದು ತರುವ ಪ್ರಯತ್ನ ನಡೆಸಲಾಗುತ್ತಿದೆ. ಇದು ನಿಲ್ಲಬೇಕು?. ಮೌಲ್ಯಯುತ ಶಿಕ್ಷಣದ ಕಡೆಗೆ ಗಮನ ಹರಿಸಬೇಕು ಎಂದ ಅವರು ಇತ್ತೀಚಿಗೆ ಕೃತಕ ಬುದ್ದಿಮತ್ತೆಯಂತಹ ಶಿಕ್ಷಣದ ಕಡೆಗೆ ವಿದ್ಯಾರ್ಥಿಗಳು ನೋಡುತ್ತಿರುವುದನ್ನು ಗಮನಿಸಿದ್ದೆನೇ. ಇದರ ಕಡೆಗೆ ಹೆಚ್ಚು ಗಮನ ನೀಡದೆ, ಎಲ್ಲಾ ಮಾಹಿತಿಗಳಿಗೂ ಮೊಬೈಲ್ ಗಳ ಮೊರೆ ಹೋಗದೇ, ವಿಕ್ಷಣೆ ನಿಲ್ಲಿಸಿ, ಒಳ್ಳೆಯದನ್ನಷ್ಟೇ ಉಪಯೋಗಿಸಿಕೊಂಡು, ಒಂದು ದಿನಕ್ಕೆ ಕನಿಷ್ಠ ಐದು ಗಂಟೆಗಳ ಕಾಲ ಓದಿನ ಕಡೆಗೆ ಗಮನ ಹರಿಸಬೇಕು ಎಂದು ನೆರೆದಿದ್ದ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಛಲವಾದಿ ಸಮುದಾಯದ ವಿದ್ಯಾರ್ಥಿಗಳಿಗೆ ಶ್ರೀ ದೀಪಂಕರ ಮೈತ್ರೆಯ ಸೋಷಿಯಲ್ ಅಂಡ್ ಚಾರಿಟಬಲ್ ಟ್ರಸ್ಟ್ ನ ವತಿಯಿಂದ ಪುರಸ್ಕೃತ ವಿದ್ಯಾರ್ಥಿಗಳಿಗೆ ಕಿರು ಕಾಣಿಕೆ ನೀಡಿ, ಪ್ರೋತ್ಸಾಹಿಸಲಾಯ್ತು.
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ಘಟಕದ ಅಧ್ಯಕ್ಷರಾದ ಸಿ. ಗುರುರಾಜಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕೋಲಿಗೆರೆಯ ನಿವೃತ್ತ ಅಭಿಯಂತರರಾದ ಕುಮಾರಸ್ವಾಮಿ ರವರು ಮತ್ತು ಹೊಸಕೋಟೆಯ ಸಾದರಬೀದಿಯ ಮುರಳಿ ರವರು ವೇದಿಕೆಯಲ್ಲಿದ್ದರು.
ಕಾರ್ಯಕ್ರಮವನ್ನು ಹಿರಿಯರಾದ ಬಿ. ದೊಡ್ಡರಂಗಪ್ಪ ರವರು ನಿರೂಪಿಸಿದರೆ, ಮಹಾಸಭಾದ ಪ್ರಧಾನ ಕಾರ್ಯದರ್ಶಿ ಡಿ ಎನ್ ಎಲ್ ಎನ್ ಮೂರ್ತಿ ಸ್ವಾಗತಿಸಿ, ವಂದಿಸಿದರು. ಉಪಾಧ್ಯಕ್ಷರಾದ ಕೊನಘಟ್ಟದ ಎ. ಮುನಿಕೃಷ್ಣ ಪ್ಪ, ಗೂಳ್ಯ ಮುನಿದಾಸಪ್ಪ, ಸಕ್ಕರೆ ಗೊಲ್ಲಹಳ್ಳಿಯ ಹನುಮಂತಯ್ಯ, ಆರೂಢಿಯ ಲಕ್ಷ್ಮೀಪತಿ, ಕೃಷ್ಣಪ್ಪ, ದೊಡ್ಡಬೆಳವಂಗಲ ಹೋಬಳಿ ಘಟಕದ ಎನ್. ಉದಯಶಂಕರ್, ಮಧುರೆ ಹೋಬಳಿಯ ವೆಂಕಟೇಶ್, ತೂಬಗೆರೆಯ ವೆಂಕಟೇಶ್, ದಯಾನಂದ, ಶಂಕರ್ ಕಚೇರಿಪಾಳ್ಯ,ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಮೇನಕಮ್ಮ, ಹಮಾಮ್ ರತ್ನಮ್ಮ, ಲಕ್ಷ್ಮಣ, ಗಂಟಿಗಾನಳ್ಳಿಯ ಮುನಿಯಮ್ಮ, ರವಿ, ಕೊನಘಟ್ಟದ ಹರೀಶ್ ಮತ್ತು ಸಂಗಡಿಗರು ಹಾಗೂ ಪದಾಧಿಕಾರಿಗಳು ಮತ್ತು ನೂರಾರು ಕಾರ್ಯಕರ್ತರು, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ
ಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ವ್ಯಸನಗಳಿಂದ ದೂರವಿರಿ:ಡಾ.ನವೀನ್ ಕುಮಾರ್
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯು ದುಶ್ಚಟಗಳಿಗೆ ಬಲಿ ಯಾಗುತ್ತಿರುವುದು ಆತಂಕದ ವಿಷಯ ವಾಗಿದ್ದು ಆ ನಿಟ್ಟಿನಲ್ಲಿ ಯುವ ಸಮುದಾಯವನ್ನು ಜಾಗೃತಿ ಗೊಳಿಸಬೇಕಾಗಿದೆ ಎಂದು ಮಹಿಳಾ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ಡಾ. ಎಂ ಬಿ ನವೀನ್ ಕುಮಾರ್ ಹೇಳಿದರು
ಅವರು ನಗರದ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ರಾಜ್ಯ ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆ ಯಿಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಯುವ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಯುವಕರ ಶಕ್ತಿಯನ್ನು ಹಾಳುಗೆಡವಲು ಮಾದಕ ವ್ಯಸನವು ಭೂತದ ತರ ಕಾಡುತಿದ್ದು ಬೀಡಿ.ಸಿಗರೇಟ್ ಮದ್ಯಪಾನ ಜೂಜಾಟ ದಂತಹ ಅನೇಕ ದುಶ್ಚಟಗಳಿಂದ ವಿದ್ಯಾರ್ಥಿ ಗಳು ಹಾಗು ಯುವಜನತೆ ಒಳಗಾಗಬಾರದು. ನಮಗಿರುವ ಸಮಯದಲ್ಲಿ ಎಂಟು ಘಂಟೆ ನಿದ್ದೆ ಮತ್ತು ಊಟ ಮತ್ತು ಸ್ವಚ್ಚತೆಗೆ ಮೀಸಲಿಟ್ಟು ದಿನದಲ್ಲಿ ಕನಿಷ್ಟ ಐದು ಘಂಟೆ ಗಳ ಕಾಲ ಓದಿಗೆ ಮೀಸಲಿಟ್ಟು ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿ ಕೊಳ್ಳಬೇಕು.
ಕಾಲೇಜ್ ವಿದ್ಯಾರ್ಥಿಗಳು ಅತಿ ಹೆಚ್ಚು ಇಂತಹ ದುಷ್ಟಗಳಿಗೆ ಬಲಿಯಾಗುತ್ತಿದ್ದು ನಾವು ಅವರಿಗೆ ಅವಶ್ಯಕ ಮಾಹಿತಿ ಮತ್ತು ಜಾಗೃತಿ ಮೂಡಿಸಬೇಕಾಗಿದೆ. ಜೀವನ ಶೈಲಿ ಬದಲಾದಂತೆ ನಮ್ಮ ಬದುಕನ್ನು ಸದೃಢಗೊಳಿಸಲು ಇಂಥ ದುಷ್ಟಗಳಿಂದ ದೂರವಿರಬೇಕಾಗಿದೆ. ಸಾಮಾಜಿಕ ವ್ಯವಸ್ಥೆಯಲ್ಲಿ ನಮ್ಮ ಜೀವನವನ್ನು ಇದಕ್ಕೆ ಬಲಿಕೊಡದೆ ಜಾಗೃತರಾಗಬೇಕು ಎಂದರು.

ನಂತರ ಗ್ರಾಮಂತರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ಸಾಧಿಕ್ ಪಾಷ ಮಾತನಾಡಿ ಇಂದು ವಿದ್ಯಾರ್ಥಿಗಳು ಅತಿ ಹೆಚ್ಚು ದಾರಿತಪ್ಪುತ್ತಿರುವುದು ಸಾಮಾಜಿಕ ಜಾಲತಾಣದಿಂದ. ಮೊಬೈಲ್ ಗೀಳು ಅಂಟಿಕೊಂಡು ವಾಟ್ಸಪ್ ಫೇಸ್ಬುಕ್ ಅತಿ ಹೆಚ್ಚು ನೋಡುವುದು. ಸೋಷಿಯಲ್ ಮೀಡಿಯಾದಿಂದ ಆಗುವ ಸೈಬರ್ ವಂಚನೆ ,ಆನ್ ಲೈನ್ ಗೇಮಿಂಗ್ ರಮ್ಮೀ ಆಪ್ ಗಳಿಂದ ವಿದ್ಯಾರ್ಥಿಗಳು ಎಚ್ಚರಿಕೆಯಿಂದಿರಬೇಕು. ಇತ್ತೀಚೆಗೆ ಸೈಬರ್ ವಂಚಕರು ಡಿಜಿಟಲ್ ಅರೆಸ್ಟ್ ಎಂಬ ಅಸ್ತ್ರ ಬಳಸಿ ಅನೇಕರಿಂದ ಹಣ ಸುಲಿಗೆ ಮಾಡುತಿದ್ದು ಇಂತಹ ಬಲೆಗಳಿಗೆ ಸಿಲುಕಿದ ವರು ತಕ್ಷಣ ಸಹಾಯವಾಣಿಗೆ ಕರೆ ಮಾಡಿ ದೂರು ದಾಖಲಿಸಬೇಕು. ನಮ್ಮ ಅನೇಕ ಸಮಸ್ಯೆಗಳಿಗೆ ನೇರವಾಗಿ ಈ ಸಾಮಾಜಿಕ ಜಾಲತಾಣಗಳೆ ಕಾರಣವಾಗಿದೆ ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಕೆ ಕಡಿಮೆ ಮಾಡಿ ಎಂದರು.
ನಂತರ ನಗರ ಠಾಣೆ ಅಮರೇಶ್ ಗೌಡ ಮಾತನಾಡಿ ಎಲ್ಲರೂ ಕಡ್ಡಾಯ ವಾಗಿ ಸಂಚಾರಿ ನಿಯಮಗಳನ್ನು ಪಾಲಿಸುವುದ ರಿಂದ ಅಪಘಾತಗಳನ್ನು ತಡೆಯಬಹುದು. . ವಿದ್ಯಾರ್ಥಿಗಳು 18 ವರ್ಷ ತುಂಬುವ ತನಕ ವಾಹನಗಳನ್ನು ಚಲಾಯಿಸ ಬಾರದು. ಕಡ್ಡಾಯವಾಗಿ ಪರವಾನಿಗೆ ಪಡೆದು ವಾಹನಗಳನ್ನು ಚಲಾಯಿಸಬೇಕು.

ಹೆಲ್ಮೆಟ್ ಹಾಕುವುದು ಕಾರಲ್ಲಿ ಸೀಟ್ ಬೆಲ್ಟ್ ದರಿಸುವುದು, ರಸ್ತೆಗಳಲ್ಲಿ ವಾಹನ ಚಲಾಯಿಸುವಾಗ ನಿಯಮಗಳನ್ನು ಪಾಲನೆ ಮಾಡುವುದು ಅತಿ ಮುಖ್ಯವಾಗಿದೆ.
ವಿದ್ಯಾರ್ಥಿಗಳು ಹಾಗು ಯುವ ಜನತೆ ಐ.ಪಿ.ಎಲ್ ಬೆಟ್ಟಿಂಗ್ ನಂತಹ ದುಶ್ಚಟದಿಂದ ದೂರವಿರಬೇಕು ಮತ್ತು ಅಪ್ರಾಪ್ತರು ಯಾವುದೇ ಕಾರಣಕ್ಕೂ ವಾಹನ ಚಲಾಹಿಸ ಬಾರದು. ಚಲಾಯಿಸಿದಲ್ಲಿ ವಾಹನದ ಮಾಲಿಕರಿಗೆ ದಂಡ ಹಾಗು ಒಂದು ವರ್ಷದ ಜೈಲು ಶಿಕ್ಷೆಯು ಅನುಭವಿಸ ಬೇಕಾಗಿತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕಾರ್ಯ ನಿರತ ಪತ್ರ ಕರ್ತರ ಸಂಘದ ತಾಲೂಕು ಅಧ್ಯಕ್ಷ ಚಂದ್ರ ಶೇಖರ್.ಡಿ.ಉಪ್ಪಾರ್,ವಕೀಲ ವಿಜಯ್ ಕುಮಾರ್,ಮಾಹಿತಿ ಹಕ್ಕು ಕಾರ್ಯ ಕರ್ತರ ವೇದಿಕೆ ರಾಜ್ಯ ಸಂಚಾಲಕ ಕೆಹೆಚ್. ವೆಂಕಟೇಶ್,ರಾಜ್ಯ ಪ್ರದಾನ ಕಾರ್ಯದರ್ಶಿ ರಾಘವೇಂದ್ರ, ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಯುವ ಘಟಕ ಅಧ್ಯಕ್ಷ ಎಂ ಸತೀಶ್ , ಉಪಾದ್ಯಕ್ಷ ಸುಮೇಶ್, ವಿನಯಗೌಡ, ಸಂಘಟನ ಕಾರ್ಯದರ್ಶಿ ಶಂಕರನಾಗ್, ಹೋಬಳಿ ಆದ್ಯಕ್ಷ ದರ್ಶನ್, ಉಪನ್ಯಾಸಕ ರಾದ ಭಾಸ್ಕರ್,ಪ್ರಭಾಕರ್,ಸತೀಶ್ ಸೇರಿ ದಂತೆ ಕಾರ್ಯಕರ್ತರು, ವಿದ್ಯಾರ್ಥಿಗಳು ಹಾಜರಿದ್ದರು.
ಬೆಂಗಳೂರು ಗ್ರಾಮಾಂತರ
ಲೋಕಾ ಬಲೆಗೆ ಬಿದ್ದ ಗ್ರೇಡ್ 2 ತಹಶೀಲ್ದಾರ್ ದಿವಾಕರ್: ಒಂದೂವರೆ ಲಕ್ಷ ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಲಾಕ್.
ಒಂದೂವರೆ ಲಕ್ಷ ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಗ್ರೇಡ್ 2 ತಹಶೀಲ್ದಾರ್ ದಿವಾಕರ್. ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯ ಗ್ರೇಡ್ 2 ತಹಶೀಲ್ದಾರ್ ದಿವಾಕರ್ ಅವರು ದೂರುದಾರರಿಂದ ಸುಮಾರು ಒಂದೂವರೆ ಲಕ್ಷ ಲಂಚ ಪಡೆಯುವ ವೇಳೆ ಲೋಕಾಯುಕ್ತ ಆಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ನೆಲಮಂಗಲ ತಾಲೂಕಿನ ಗಿರಿಯನಪಾಳ್ಯದ ಸರ್ವೇ 1/1A1 ರೀ ಪೋಡಿ 1/4, 1/7. 8 .20 ಗುಂಟೆ ಕೋರ್ಟ್ ಸೇಲ್ ಡೀಡ್ ಪ್ರಕಾರ ಖಾತೆ ಮಾಡಬೇಕಾಗಿತ್ತು, ಇದನ್ನು ಮಾಡಿಕೊಡಲು ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯ ಗ್ರೇಡ್ 2 ತಹಶೀಲ್ದಾರ್ ದಿವಾಕರ್ ಅವರು ದೂರುದಾರ ನೆಲಮಂಗಲ ತಾಲೂಕಿನ ಅಪ್ಪಗೊಂಡನಹಳ್ಳಿಯ ವಕೀಲರಾದ ದೊರೆಸ್ವಾಮಿ.ಎಲ್ ಅವರ ಬಳಿ ಸುಮಾರು 2ಲಕ್ಷ ಬೇಡಿಕೆ ಇಟ್ಟಿದ್ದರು, ಒಂದೂವರೆ ಲಕ್ಷ ಕೊಡುವಂತೆ ಮಾತುಕತೆ ಆಗಿತ್ತು, ಅದರ ಪ್ರಕಾರ ಇಂದು ದೇವನಹಳ್ಳಿ ಬಳಿ ಮಾತುಕತೆ ಪ್ರಕಾರ ಒಂದೂವರೆ ಲಕ್ಷ ನೀಡುವಾಗ ಲೋಕಾಯುಕ್ತಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ರಮೇಶ್ ಮತ್ತು ತಂಡ ದಾಳಿ ನಡೆಸಿ ಬಂಧಿಸಲಾಗಿದೆ. ಸದ್ಯ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ಮುಂದುವರಿದಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
-
ಬೆಂಗಳೂರು ಗ್ರಾಮಾಂತರ6 months agoಕಾವೇರಿ ಹಾಗೂ ಎತ್ತಿನಹೊಳೆ ನೀರು ಕೊಡಿ ವೃಷಭಾವತಿ ನೀರು ಬೇಡ – ಶಾಸಕ ಧೀರಜ್ ಮುನಿರಾಜ್.
-
ಬೆಂಗಳೂರು ಗ್ರಾಮಾಂತರ6 months agoಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ : ಡಿ.ಕೆ.ಶಿವಕುಮಾರ್
-
ತುಮಕೂರು6 months agoಎತ್ತಿನ ಹೊಳೆ ಯೋಜನೆಯ ಕಾಮಗಾರಿಗಳ ಪರಿಶೀಲನೆ
-
ಬೆಂಗಳೂರು ಗ್ರಾಮಾಂತರ6 months agoಮಿಂಚಿನ ಕಾರ್ಯಾಚರಣೆ. ದರೋಡೆಕೋರರ ಬಂಧನ.
-
ಬೆಂಗಳೂರು ಗ್ರಾಮಾಂತರ6 months agoಪ್ರತಿಯೊಬ್ಬರೂ ವ್ಯಕ್ತಿತ್ವ, ಸಾಮಾಜಿಕ ಪ್ರಜ್ಞೆಯನ್ನು ಮೈಗೂಡಿಸಿಕೊಳ್ಳಬೇಕು.
-
ಬೆಂಗಳೂರು ಗ್ರಾಮಾಂತರ5 months agoಪ್ರತಿಭಾ ಪುರಸ್ಕಾರ ಸಮಾರಂಭ
-
ಬೆಂಗಳೂರು ಗ್ರಾಮಾಂತರ5 months agoಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ವ್ಯಸನಗಳಿಂದ ದೂರವಿರಿ:ಡಾ.ನವೀನ್ ಕುಮಾರ್
-
ಮೈಸೂರು6 months agoಇ-ಸ್ವತ್ತು ನೀಡಲು ಲಂಚ. ವಲಯ ಕಚೇರಿ 4 ರ ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ.
